ಬ್ರೇಕಿಂಗ್ ನ್ಯೂಸ್
03-07-21 04:57 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯನ್ನು ಮಂಗಳೂರು - ಬೆಂಗಳೂರು ನಡುವಿನ ರೈಲಿಗೆ ಜೋಡಿಸಲಾಗಿದ್ದು ಮುಂದಿನ ವಾರದಲ್ಲಿ ಸಂಚಾರಕ್ಕೆ ಲಭಿಸಲಿದೆ.
ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಜು.7ರಿಂದ ಸೇರ್ಪಡೆಗೊಳ್ಳಲಿದೆ. ಇದಕ್ಕಾಗಿ ಶನಿವಾರದಿಂದಲೇ (ಜು.3) ಬುಕಿಂಗ್ ಆರಂಭಿಸಲಾಗಿದೆ. ಈ ಬೋಗಿಯ ಪ್ರಯಾಣಕ್ಕೆ ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ.





ಪ್ರಕೃತಿ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟದ ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯ ಬದಲಿಗೆ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು- ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದ ವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.
ರೈಲು ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ವೇಳೆ ಅಲ್ಲಿನ ಘಟ್ಟಗಳ ಸೌಂದರ್ಯವನ್ನು ರೈಲಿನೊಳಗೆ ಕುಳಿತೇ ಸವಿಯುವ ಅವಕಾಶ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಬರುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲ ಆಗಿರುವುದರಿಂದ ಗಾಜಿನ ಬೋಗಿಯ ಪ್ರಯಾಣ ವಿಶೇಷ ಆಗುವುದರಲ್ಲಿ ಸಂಶಯವಿಲ್ಲ.






ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ - ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್ ಬೋಗಿ ಸೇರ್ಪಡೆಯಾಗಲಿವೆ.
Rail passengers traveling between Bengaluru and Mangaluru during the day can now get a panoramic view of the picturesque ghats section as the train service will be inaugurated next week with bookings open.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm