ಬ್ರೇಕಿಂಗ್ ನ್ಯೂಸ್
05-07-21 02:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಇನ್ನು ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿದ್ದ ವಾಣಿಜ್ಯ ಪ್ರದೇಶ, ಭಕ್ತರಿಲ್ಲದೆ ಭಣಗುಡುತ್ತಿದ್ದ ಧಾರ್ಮಿಕ ಕೇಂದ್ರಗಳಲ್ಲಿ ಮೊದಲಿನಂತೆ ಕಳೆ ಬರಲಿದೆ.

ಗ್ರಾಹಕರ ಸ್ವಾಗತಕ್ಕೆ ಬಹುತೇಕ ಕಡೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಾಲ್, ಚಿನ್ನಾಭರಣ, ಬೃಹತ್ ಬಟ್ಟೆ ಅಂಗಡಿಗಳ ಮುಂದೆ ಗ್ರಾಹಕರನ್ನು ಸ್ವಾಗತಿಸುವ ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದೆ.
ಸರ್ಕಾರ ನಿರ್ಬಂಧಗಳನ್ನು ಹೇರಿದ್ದ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಜೆ 5ರವರೆಗೆ ಮಾತ್ರ ಓಪನ್ ಇದ್ದ ಅಂಗಡಿಗಳು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಹಿವಾಟು ನಡೆಸಲಿವೆ.

ಶೇ.100ರಷ್ಟು ಪ್ರಯಾಣಿಕರ ಸಂಚಾರ
ಸೋಮವಾರದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಮಾತ್ರವಲ್ಲದೆ, ಆಟೋ, ಟ್ಯಾಕ್ಸಿ, ಖಾಸಗಿ ಸಾರಿಗೆ ವಾಹನಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಶೇ.100ರಷ್ಟುಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.


ಕರ್ಫ್ಯೂ ಸಡಿಲಗೊಳಿಸಿದ ಸರ್ಕಾರ
ವಾರಾಂತ್ಯ ಕಫ್ರ್ಯೂ ತೆರವುಗೊಳಿಸಿ, ರಾತ್ರಿ ಕಫ್ರ್ಯೂ ಅನ್ನು ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿರುವುದರಿಂದ ಶನಿವಾರ, ಭಾನುವಾರವೂ ಸೇರಿ ವಾರದ 7 ದಿನ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ರಾತ್ರಿ 9 ಗಂಟೆವರೆಗೂ ನಡೆಸಬಹುದಾಗಿದೆ. ಹೋಂ ಡೆಲಿವರಿಗೆ 24 ಗಂಟೆಯೂ ಅವಕಾಶವಿದೆ. ಮದುವೆ ಸೇರಿದಂತೆ ಶುಭ-ಸಮಾರಂಭಗಳಿಗೆ 100 ಮಂದಿ, ಅಂತ್ಯಸಂಸ್ಕಾರಕ್ಕೆ 20 ಮಂದಿ ಭಾಗಿಯಾಗಬಹುದು.
ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಭೆ, ಸಮಾರಂಭಗಳು, ಪ್ರತಿಭಟನೆ ನಡೆಸಲು, ಪಬ್ಗಳ ಕಾರ್ಯಾಚರಣೆಗೆ ಇರುವ ನಿರ್ಬಂಧವನ್ನು ಮುಂದುವರೆಸಲಾಗಿದೆ. ಶಾಲಾ, ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾತ್ರಿ 8 ಗಂಟೆವರೆಗೆ ಮೆಟ್ರೋ ಸಂಚಾರಕ್ಕೆ ಅನುಮತಿ
ಉದ್ಯಾನನಗರಿ ಬೆಂಗಳೂರಿನಲ್ಲಿ ಇಷ್ಟುದಿನ ಸಂಜೆ 5ರವರೆಗೆ ಮಾತ್ರ ಸೀಮಿತ ಅವಧಿಯಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲು ಸೋಮವಾರದಿಂದ ರಾತ್ರಿ 8 ಗಂಟೆಯವರೆಗೂ ಸಂಚರಿಸಲಿದೆ. ಜೊತೆಗೆ ಇಷ್ಟುದಿನ ಶೇ.50ರಷ್ಟುಪ್ರಯಾಣಿಕರ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm