ಬ್ರೇಕಿಂಗ್ ನ್ಯೂಸ್
02-09-20 11:16 am Headline Karnataka News Network ಕರ್ನಾಟಕ
ಮಂಡ್ಯ, ಸೆಪ್ಟೆಂಬರ್.2: ಡ್ರಗ್ಸ್ ಮಾಫಿಯಾದಲ್ಲಿ ಬೆಂಗಳೂರು ಹಾಗೂ ಸ್ಯಾಂಡಲ್ವುಡ್ ಒಂದು ಕಡೆಯಾದ್ರೆ, ಗ್ರಾಮೀಣ ಭಾಗ ಇನ್ನೊಂದು ಕಡೆಯಾಗಿದ್ದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲೂ ಡ್ರಗ್ಸ್ ದೊರೆಯುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಶಿವರಾಮೇಗೌಡ,. ಗ್ರಾಮೀಣ ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದು, ಯುವಕರು ಇದರಿಂದ ಹಾಳಾಗುತ್ತಿದ್ದಾರೆ. ಇದೆಲ್ಲವನ್ನು ಕಂಡರೂ ಕಾಣದಂತೆ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ . ನಾಗಮಂಗಲದಲ್ಲೂ ಡ್ರಗ್ಸ್ ಮಾರಾಟ ಜೋರಾಗಿ ನಡೆಯುತ್ತಿದೆ ಎಂದಿದ್ದಾರೆ.

ಈ ಹಿಂದೆ ಮಹಾನ್ ನಟರು ಇದ್ದ ಸ್ಯಾಂಡಲ್ವುಡ್ನಲ್ಲಿ ಈ ರೀತಿಯ ಚಟುವಟಿಕೆಗಳು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ. ಬೆಂಗಳೂರಿನ ಕಲ್ಯಾಣ ನಗರದ ನನ್ನ ಶಾಲೆಯ ರಸ್ತೆಯಲ್ಲಿ ನೈಜೀರಿಯಾ, ಸೌಥ್ ಆಫ್ರಿಕಾ ಪ್ರಜೆಗಳು ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡ್ತಾ ಇದ್ದಾರೆ. ಈ ಬಗ್ಗೆ ಪೊಲೀಸರಿಗೆ ಹೇಳಿದ್ರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಈ ಡ್ರಗ್ಸ್ ದಂಧೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಾತ್ರವಲ್ಲ ಕಳೆದ 20 ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದೆ. ಆದ್ರೆ ಇದೀಗ ಹಂತ ಹಂತವಾಗಿ ದೊಡ್ಡ ಪ್ರಮಾಣಕ್ಕೆ ಈ ದಂಧೆ ವ್ಯಾಪಿಸಿದೆ. ಡ್ರಗ್ಸ್ ದಂಧೆಕೋರರಿಗೆ ರಾಜಕಾರಣಿಗಳು ಹಾಗೂ ಪ್ರಭಾವಿಗಳ ಬೆಂಬಲದಿಂದ ಇಷ್ಟರ ಮಟ್ಟಿಗೆ ಈ ದಂಧೆ ವ್ಯಾಪಿಸಿದೆ. ಇದಲ್ಲದೇ ಗೋವಾ, ಶ್ರೀಲಂಕಾಗಳಿಗೆ ಕರೆದುಕೊಂಡು ಹೋಗಿ ಇಸ್ಪೀಟ್ ಆಟ ಆಡಿಸಲಾಗುತ್ತಿದೆ ಹಾಗೂ ತೋಟದ ಮನೆಗಳಲ್ಲಿ ರೇವ್ ಪಾರ್ಟಿಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮವಹಿಸಬೇಕಾಗಿದೆ ಎಂದು ಶಿವರಾಮೇಗೌಡ ಆಗ್ರಹಿಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm