ಬ್ರೇಕಿಂಗ್ ನ್ಯೂಸ್
06-07-21 11:34 am Headline Karnataka News Network ಕರ್ನಾಟಕ
ಬಾಗಲಕೋಟೆ, ಜುಲೈ 6: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಬೈಕ್ ಸವಾರ ಕೂಡಲೆಪ್ಪ ಬೋಳಿ(58ವ) ತೀವ್ರ ಗಾಯಗೊಂಡು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದೆ.
ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಚಿದಾನಂದ ಅವರ ಕಾರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಗುದ್ದಿದೆ. ಮೃತರು ಬಾಗಲಕೋಟೆ ತಾಲ್ಲೂಕಿನ ಚಿಕ್ಕಹಂಡರಗಲ್ ನಿವಾಸಿಯೆಂದು ಗುರುತಿಸಲಾಗಿದೆ.




ಮೃತರ ಸಂಬಂಧಿಕರು ಆಕ್ರೋಶ:
ಮಂತ್ರಿಗಳ ಮಕ್ಕಳು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಸಾಕ್ಷಿಗಳನ್ನು ನಾಶಪಡಿಸಲು ನೋಡುತ್ತಿದ್ದಾರೆ, ಅವರು ಕಾರಿನ ನಂಬರ್ ಪ್ಲೇಟ್ ನ್ನು ಜಖಂಗೊಳಿಸಿದ್ದಲ್ಲದೆ, ಆವಾಜ್ ಹಾಕಿದ್ದಾರೆ, ಘಟನೆಯನ್ನು ಸೆರೆಹಿಡಿಯಲು ಯತ್ನಿಸಿದವರ ಮೊಬೈಲ್ ಗಳನ್ನು ಕಿತ್ತುಕೊಂಡಿದ್ದಾರೆ ಎಂದು ಮೃತರ ಸಂಬಂಧಿ ಆರೋಪಿಸಿದ್ದಾರೆ.
ಬಾಗಲಕೋಟೆಯ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಕೂಡಲೆಪ್ಪ ಬೋಳಿ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅವರ ಸಂಬಂಧಿಕ ಸಿದ್ದಪ್ಪ ಮಾತನಾಡಿ, ಇವರಿಗೆ ಬಡವರು, ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಚಿದಾನಂದ ಸವದಿಯವರು ತಮ್ಮ ಗಾಡಿಯ ನಂಬರ್ ಪ್ಲೇಟ್ ನ್ನು ಮುರಿದು ಅದರಲ್ಲಿರುವ ದಾಖಲೆಗಳನ್ನು ಮತ್ತು ಜನರನ್ನು ಮುಂದಿನ ಗಾಡಿಗೆ ಹಾಕಿ ಕಳುಹಿಸಿದ್ದಾರೆ. ಅಪಘಾತವಾದ ಕಾರಿನ ಫೋಟೋ, ವಿಡಿಯೊ ಸೆರೆಹಿಡಿಯುತ್ತಿದ್ದವರಿಗೆ ಬೈದು ಮೊಬೈಲ್ ಕಿತ್ತುಕೊಂಡರು, ಪೊಲೀಸರು ಬರುವ ಹೊತ್ತಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಪಘಾತವಾದ ಕಾರು ನನ್ನದೇ, ಅದರಲ್ಲಿ ನಾನಿರಲಿಲ್ಲ :
ನಾನು ಮುಂದಿದ್ದ ಸ್ನೇಹಿತರ ಕಾರಲ್ಲಿದ್ದೆ. ನನ್ನ ಕಾರ್ನಲ್ಲಿ ನನ್ನ ಚಾಲಕ ಹಾಗೂ ಮೂವರು ಸ್ನೇಹಿತರು ಇದ್ದರು. ದ್ವಿಚಕ್ರವಾಹನ ಸವಾರ ಏಕಾಏಕಿ ಅಡ್ಡ ಬಂದಿದ್ದರಿಂದ ಅಪಘಾತವಾಗಿದೆ ಎಂದು ಚಾಲಕ ತಿಳಿಸಿದ. ಆಗ ನಮ್ಮ ಕಾರು ಸುಮಾರು ಮೂವತ್ತು ಕಿ.ಮೀ. ದೂರದಲ್ಲಿತ್ತು ಎಂದು ಹೇಳಿದರು.
ಚಾಲಕ ಮಾಹಿತಿ ಕೊಡುತ್ತಿದ್ದಂತೆಯೇ ನಾನೇ ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿದ್ದೆ. ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದೆ. ಬೇರೆ ಆಸ್ಪತ್ರೆಯಲ್ಲಿ ಆಮ್ಲಜನಕ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದರು. ರಾತ್ರಿ 8ಕ್ಕೆ ಕರೆ ಮಾಡಿದಾಗ ಸಾವಿಗೀಡಾದ ಸುದ್ದಿ ತಿಳಿಸಿದರು ಎಂದರು.
ನಾವು ಅಪಘಾತ ಸ್ಥಳಕ್ಕೆ ವಾಪಸಾಗುವ ವೇಳೆಗೆ ಅಲ್ಲಿ ಯಾರೂ ಇರಲಿಲ್ಲ. ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಹೋಗಲು ಒಂದು ತಾಸು ಬೇಕಾಯಿತು. ಬಾಗಲಕೋಟೆ ಎಸ್ಪಿ ಜೊತೆಗೂ ಮಾತನಾಡಿದ್ದೆ. ಕಾರಿನ ನಂಬರ್ ಪ್ಲೇಟ್ ಬದಲಿಸಿದ ವಿಷಯ ನನಗೆ ಗೊತ್ತಿಲ್ಲ ಎಂದರು.
ಯಾರಿಗೂ ಧಮಕಿ ಹಾಕುವ ಪ್ರಶ್ನೆಯೇ ಇಲ್ಲ. ಜೀವ ಎಂದರೆ ಎಲ್ಲರಿಗೂ ಒಂದೆ. ಡಿಸಿಎಂ ಪುತ್ರ ಎಂಬ ಕಾರಣಕ್ಕೆ ಮಾನವೀಯತೆ ಬಿಡಲಾಗುವುದಿಲ್ಲ. ಯಾರೊಂದಿಗೂ ವಾಗ್ವಾದ ನಡೆಸಿಲ್ಲ. ಆರೋಪಿಸಿದವರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಆಸ್ಪತ್ರೆ ಬಳಿ ಕುಟುಂಬದವರಾರೂ ನನಗೆ ಭೇಟಿಯಾಗಲಿಲ್ಲ. ಆ ಕುಟುಂಬದವರ ಮನೆಗೆ ಹೋಗಿ ಸಾಂತ್ವನ ಹೇಳುತ್ತೇನೆ ಎಂದು ತಿಳಿಸಿದರು.
DCM Laxman Savadi’s son’s car rams into bike killing 58-year-old rider in Bagalkot
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm