ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm