ಬ್ರೇಕಿಂಗ್ ನ್ಯೂಸ್
10-07-21 10:47 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ.


ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಣಂಬೂರಿನಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಮಂಗಳೂರು, ಭಟ್ಕಳ, ಶಿರಾಲಿ, ಧರ್ಮಸ್ಥಳ, ಹುಂಚದಕಟ್ಟೆ, ಕೋಟ, ಶಿನಿವಾಸಪುರ, ಕದ್ರ, ಕಾರ್ಕಳ, ಮಾಣಿ, ಕೊಲ್ಲೂರು, ಭರಮಸಾಗರ, ಬಾದಾಮಿ, ಮಂಕಿ, ಸಿದ್ದಾಪುರ, ಮೂಡುಬಿದಿರೆ, ಬೀದರ್, ತಾಳಗುಪ್ಪ, ಲಿಂಗನಮಕ್ಕಿ, ಶಿವಮೊಗ್ಗ, ಆಗುಂಬೆ, ಶೃಂಗೇರಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 10-14ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
The India Meteorological Department (IMD) issued red and orange alerts for Karnataka on Friday following widespread rainfall in Karnataka’s coastal regions.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm