ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm