ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm