ಬ್ರೇಕಿಂಗ್ ನ್ಯೂಸ್
15-07-21 01:14 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 15: ಪಕ್ಷದ ಚಟುವಟಿಕೆಯಿಂದ ದೂರ ಸರಿದಿರುವ ವಿಚಾರದಲ್ಲಿ ಕಡೆಗೂ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಬಾಯಿ ತೆರೆದಿದ್ದಾರೆ. ಮೈಸೂರಿನಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಂ ಸಮುದಾಯದ ವಿಷಯಗಳನ್ನ ನೀವೇ ತೀರ್ಮಾನ ಮಾಡಿದ್ರೆ ಮುಸ್ಲಿಮರು ಯಾಕೆ ಬೇಕ್ರೀ ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಬಗ್ಗೆ ತಿವಿದಿದ್ದಾರೆ.
ಪಕ್ಷದಲ್ಲಿ ದಲಿತರ ಸಮಸ್ಯೆಯನ್ನ ದಲಿತರು, ಲಿಂಗಾಯ್ತರ ಸಮಸ್ಯೆಯನ್ನ ಲಿಂಗಾಯ್ತರೇ ಪರಿಹಾರ ಮಾಡ್ತಾರೆ. ಮುಸ್ಲಿಮರ ಸಮಸ್ಯೆಯನ್ನ ಮುಸ್ಲಿಮರೇ ಯಾಕೆ ಪರಿಹಾರ ಮಾಡಬಾರದು..? ಈ ಮೂಲಭೂತ ಪ್ರಶ್ನೆಯೇ ನನ್ನದು. ಮುಸ್ಲಿಮರಲ್ಲಿ ಮುಂದೆ ಯಾರು ಎಂ.ಎಲ್.ಎ ಆಗಬೇಕು ಎನ್ನುವುದನ್ನ ಸಮಾಜದ ಜನ ನಾವು ತೀರ್ಮಾನ ಮಾಡುತ್ತೇವೆ. ಚೇರ್ಮನ್ ಯಾರಾಗಬೇಕು ಎಂದು ನಾವು ತೀರ್ಮಾನ ಮಾಡುತ್ತೇವೆ. ಬೇರೆಯವರು ತೀರ್ಮಾನ ಮಾಡುವುದಲ್ಲ ಎಂದು ಇಬ್ರಾಹಿಂ ಟಾಂಗ್ ನೀಡಿದ್ದಾರೆ.

ಹಿಂದುಳಿದ ವರ್ಗದವರಲ್ಲಿ ಯಾರು ಲೀಡರ್ ಆಗ್ಬೇಕು ಎಂದು ನಾವು ತೀರ್ಮಾನ ಮಾಡಿದ್ವಾ..? ದಲಿತರ ಆಯ್ಕೆ ಮಾಡುವುದರ ಬಗ್ಗೆ ದಲಿತ ನಾಯಕರು ತೀರ್ಮಾನ ಮಾಡುತ್ತಾರೆ. ಮುಸ್ಲಿಮರ ನಾಯಕ ಯಾರಾಗಬೇಕು ಎನ್ನೋದನ್ನ ನೀವುಗಳೇ ತೀರ್ಮಾನ ಮಾಡಿದರೆ ನಾವೆಲ್ಲ ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ ಸಿ.ಎಂ. ಇಬ್ರಾಹಿಂ, ಅಧಿಕಾರ ಸಿಗದಿರುವ ವರೆಗೂ ನಾನು ಎಲ್ಲಿಗೂ ಬರೋದಿಲ್ಲ ಎಂದು ನಾನು ಯಾವುದೇ ಚುನಾವಣೆಗೂ ಹೋಗಲಿಲ್ಲ. ಯಾವ ಉಪಚುನಾವಣೆಗೂ ಬರೋದಿಲ್ಲ ಎಂದಿದ್ದೇನೆ. ಮುಂದೆನೂ ಯಾವುದೇ ಚುನಾವಣೆಗೂ ಹೋಗೋದಿಲ್ಲ. ಬೆಳಗಾವಿ, ಬಸವ ಕಲ್ಯಾಣ ಚುನಾವಣೆಯಲ್ಲೂ ಕಾಂಗ್ರೆಸ್ ಸೋತಿದೆ. ಮುಸ್ಲಿಮ್ ಮತದಾರರ 70% ವೋಟ್ ಸಿಗಲಿಲ್ಲ. ನಾಯಕರಿಗೆ ಹುಮ್ಮಸ್ಸು ಸಿಗದಿದ್ದರಿಂದ ಚುನಾವಣೆಯಲ್ಲಿ ಪಾಲ್ಗೊಳ್ಳಲಿಲ್ಲ. ಅಲ್ಪ ಸಂಖ್ಯಾತರ ವೋಟು ಮಾತ್ರ ಬೇಕು ಎನ್ನೋದು ತಪ್ಪು ಎಂದರು.

ನನ್ನ ಕೋಪ ಏನಿದ್ದರೂ ವಿಷಯಾಧರಿತ. ವ್ಯಕ್ತಿಯಾಧಾರಿತ ಕೋಪ ಅಲ್ಲ.
ಸಿದ್ದರಾಮಯ್ಯ ಎಲ್ಲನು ಸರಿ ಮಾಡ್ತೇನೆ ಎಂದಿದ್ದಾರೆ, ಆದರೆ ನಾನು ದೆಹಲಿಗೆ ಹೋಗಬೇಕು ಎಂದಿದ್ದೇನೆ. ಮೇಡಂ ಅವರು ತೀರ್ಮಾನ ಮಾಡಬೇಕು, ಅದಕ್ಕೆ ದೆಹಲಿಗೆ ಹೋಗುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದರು.
ಇನ್ನು ತನ್ವೀರ್ ಸೇಠ್ ಸಿಎಂ ಆಗೋ ವಿಚಾರದಲ್ಲಿ ಪ್ರತಿಕ್ರಿಯಿಸಿದ ಇಬ್ರಾಹಿಂ, ಯಾಕೆ ಆಗಬಾರದು. ಲಿಂಗಾಯತರು, ಒಕ್ಕಲಿಗರು ಮಾತ್ರ ಸಿಎಂ ಆಗೋದಾ ? ನಾವು ಆಗಬಾರದೇ ? 800 ವರ್ಷ ದೇಶ ಆಳಿದವರು ನಾವು ಎನ್ನುವ ಮೂಲಕ ಹಳೆಯ ಮೊಘಲರ ಕಾಲದ ಪಳೆಯುಳಿಕೆ ತಾವೇ ಎನ್ನುವುದನ್ನು ನೆನಪಿಸಿದರು.
CM Ibrahim talks about the Vote bank of Muslims in Mysore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am