ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.

ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm