ಬ್ರೇಕಿಂಗ್ ನ್ಯೂಸ್
18-07-21 09:11 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 18: ಲಾಕ್ಡೌನ್ ಕಾರಣ ಇರಾನ್ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸರಕು ಹಡಗಿನಲ್ಲಿ ಭಟ್ಕಳ ಮೂಲದ ಕಾರ್ಮಿಕ ಸಿಲುಕಿದ್ದು ಕೈಯಲ್ಲಿ ವೀಸಾ ಮತ್ತು ಮರಳಿ ಬರಲು ಹಣ ಇಲ್ಲದೆ ಸಂಕಷ್ಟಕ್ಕೀಡಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಯಾಸೀನ್ ಷಾ (31) ಎನ್ನುವಾತ ಒಂದೂವರೆ ವರ್ಷದಿಂದ ಇರಾನ್ನ ಬಂದರಿನಲ್ಲಿ ಸಿಲುಕಿದ್ದಾನೆ.
ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ ಯಾಸೀನ್, 2020ರ ಜನವರಿಯಲ್ಲಿ ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್ ಕಾರಣದಿಂದ ಹಡಗನ್ನು ಬಂದರಿನಲ್ಲೇ ಲಂಗರು ಹಾಕಲಾಗಿತ್ತು. ಹಡಗು ಮೂವರ ಪಾಲುದಾರಿಕೆ ಹೊಂದಿದ್ದು, ಮಾಲೀಕರ ನಡುವಿನ ವಿವಾದದ ಕಾರಣದಿಂದ ಒಂದೂವರೆ ವರ್ಷದಿಂದ ಅಲ್ಲಿಯೇ ಉಳಿದುಕೊಂಡಿದೆ. ಭಟ್ಕಳ ಮೂಲದ ಕಾರ್ಮಿಕನ ಬಗ್ಗೆಯೂ ಯಾರೂ ಕೇರ್ ವಹಿಸಿಲ್ಲ. ಜೊತೆಗೆ ಒಂದು ವರ್ಷಗಳ ವೇತನವನ್ನೂ ನೀಡದೆ ಉಳಿಸಿಕೊಂಡಿದ್ದಾರೆ. ಇದೀಗ ಸರಕು ಹಡಗುಗಳ ಚಲನೆ ಪುನರಾರಂಭ ಗೊಂಡಿದ್ದರೂ ಯಾಸೀನ್ ಇರುವ ಹಡಗು ಅಲ್ಲಿಂದ ತೆರಳಿಲ್ಲ ಎನ್ನಲಾಗಿದೆ.
ಯಾಸೀನ್ ಇರಾನ್ಗೆ ತೆರಳಲು ಏಜೆನ್ಸಿ ಜೊತೆಗೆ ಮಾಡಿದ್ದ ಒಪ್ಪಂದವನ್ನು ಇರಾನ್ನಲ್ಲಿ ಬದಲಿಸಲಾಗಿತ್ತು. ಬಹುತೇಕ ಇರಾನ್ ಏಜನ್ಸಿಗಳು ಕಾರ್ಮಿಕರಲ್ಲಿ ಪರ್ಸಿಯನ್ ಭಾಷೆಯ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡು, ವೇತನ ಪಾವತಿಸದೆ ಕೆಲಸಗಾರರಿಗೆ ವಂಚಿಸುತ್ತದೆ. ಆದರೆ, ಪರ್ಸಿಯನ್ ಭಾಷೆ ಅಲ್ಪಸ್ವಲ್ಪ ತಿಳಿದಿದ್ದ ಯಾಸೀನ್, ಏಜೆನ್ಸಿಯ ಒಪ್ಪಂದ ಪತ್ರಕ್ಕೆ ಸಹಿ ಹಾಕದೆ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ.
ಕಳೆದ ಆರು ತಿಂಗಳಿನಿಂದ ಯಾಸೀನ್ಗೆ ಆಹಾರ ಸಾಮಗ್ರಿಗಳನ್ನೂ ನೀಡುತ್ತಿಲ್ಲ. ಬಂದರಿನಲ್ಲಿ ಲಂಗರು ಹಾಕಿರುವ ಇತರ ಹಡಗುಗಳಿಂದ ಆಹಾರಗಳನ್ನು ಪಡೆದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ತಾನು ಇರಾನ್ನಲ್ಲಿ ಅನುಭವಿಸುತ್ತಿರುವ ಸಂಕಷ್ಟದ ಕುರಿತು ಯಾಸೀನ್ ಭಾರತೀಯ ದೂತಾವಾಸ ಮತ್ತು ಇತರ ಸಂಸ್ಥೆಗಳಿಗೆ ಸಂಪರ್ಕಿಸಿ ಹೇಳಿಕೊಂಡಿದ್ದಾನೆ.
ಭಾರತ ಮತ್ತು ವಿದೇಶದ ಹಲವಾರು ಸಂಸ್ಥೆಗಳು ಯಾಸೀನ್ಗೆ ಸಹಾಯ ಮಾಡಲು ಪ್ರಯತ್ನಿಸುತ್ತಿವೆ. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಕೆಲವು ಸಂಘಟನೆಗಳು ಸಂಪರ್ಕ ಸಾಧಿಸಿವೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯನಿಗೆ ವೇತನ ಪಾವತಿಸಿ, ಮರಳಿ ಮನೆಗೆ ಕರೆತರಲು ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಏಮ್ ಇಂಡಿಯಾ ಫೋರಂ ಸ್ಥಾಪಕ ಅಧ್ಯಕ್ಷ ಶೇಖ್ ಮುಜಾಫರ್ ಶಿರಾಲಿ ಒತ್ತಾಯಿಸಿದ್ದಾರೆ.
Bhatkal man trapped in Iran harbour due to lockdown. Yasin from Bhatkal who went to work at Harbour has now been stuck for one year.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm