ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm