ಬ್ರೇಕಿಂಗ್ ನ್ಯೂಸ್
03-09-20 06:07 pm Headline Karnataka News Network ಕರ್ನಾಟಕ
ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಮೇ 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ಗೊತ್ತಾಗಿ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.
ಆದರೆ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.
ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು. ಡಿವೈಎಸ್ಪಿ ಜೆ.ಮೋಹನ್ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಟಿಪ್ಪರ್ ಲಾರಿಯಲ್ಲಿದ್ದ ಮರಳನ್ನು ತೆರವುಗೊಳಿಸಿ, ಆ ಟಿಪ್ಪರ್ ಲಾರಿಗೆ ಎಂ.ಸ್ಯಾಂಡ್ ತುಂಬಿ ಮೂಲಕ ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm