ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm