ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm