ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm