ಬ್ರೇಕಿಂಗ್ ನ್ಯೂಸ್
24-07-21 11:07 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 25: ತಾಕತ್ತಿದ್ದರೆ ದಲಿತ ಸಿಎಂ ಮಾಡಲಿ ಎಂದ ಸಿದ್ಧರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿರುಗೇಟು ನೀಡಿದ್ದಾರೆ. ಅತಿ ಹೆಚ್ಚು ಅಂಬೇಡ್ಕರ್ ಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಮೊದಲ ಸಚಿವ ಸಂಪುಟದಲ್ಲಿ ನೋವಾಗಿ ಅಂಬೇಡ್ಕರ್ ರಾಜೀನಾಮೆ ನೀಡಿದ್ದರು. ಬಳಿಕ ಲೋಕಸಭೆ ಚುನಾವಣೆಗೆ ನಿಂತಾಗ ಅಂಬೇಡ್ಕರ್ ಅವರನ್ನು ಕಾಂಗ್ರೆಸಿಗರೇ ಸೇರಿ ಸೋಲಿಸಿದರು. 2ನೇ ಬಾರಿ ಅವರ ಸಹಾಯಕನನ್ನೇ ಎದುರು ನಿಲ್ಲಿಸಿ ಸೋಲಿಸಿದರು. ಕೊನೆಗೆ ಎಷ್ಟು ಪೀಡಿಸಿದ್ದರು ಎಂದ್ರೆ ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೂ ಸರಕಾರ ಜಾಗ ಕೊಡಲಿಲ್ಲ. ಇಂಥವರು ದಲಿತ ಸಿಎಂ ಬಗ್ಗೆ ಬಿಜೆಪಿಗೆ ಹೇಳುವುದೇ.. ಕೊನೆಗೆ ಸಂವಿಧಾನ ಬರೆದವರಿಗೆ ಭಾರತ ರತ್ನವನ್ನೂ ಇವರು ಕೊಡಲಿಲ್ಲ, ಅಂಬೇಡ್ಕರ್ ಗೆ ಭಾರತ ರತ್ನ ಕೊಟ್ಟಿದ್ದು ಬಿಜೆಪಿ. ಕಾಂಗ್ರೆಸಿಗರು ದಲಿತ ನಾಯಕ ಜಗಜೀವನ್ ರಾಮ್ ಅವರನ್ನು ಅವಕಾಶ ಬಂದರೂ ಪ್ರಧಾನಿ ಮಾಡಲಿಲ್ಲ.

ಇದೇ ಸಿದ್ಧರಾಮಣ್ಣನ ದಲಿತ ವಿರೋಧಿ ಇತಿಹಾಸ ಹೇಳಬೇಕೆಂದರೆ ಕಾಂಗ್ರೆಸ್ ಗೆ ಬಂದು ಸಿಎಂ ಆಗಿದ್ದರು. ಪರಮೇಶ್ವರ್ ಗೆ ಡಿಸಿಎಂ ಮಾಡಲಿಲ್ಲ, ಬದಲಿಗೆ ತನ್ನ ಜಾಗಕ್ಕೆ ಅಡ್ಡಗಾಲು ಆಗುತ್ತಾರೆಂದು ಅವರನ್ನೇ ಚುನಾವಣೆಯಲ್ಲಿ ಸೋಲಿಸಿದರು. ಖರ್ಗೆ, ಚಂದ್ರಪ್ಪ, ದೃವನಾರಾಯಣ ಸೇರಿ ದಲಿತ ಮುಖಂಡರನ್ನು ಸೋಲಿಸಿದ್ದೇ ಸಿದ್ದರಾಮಯ್ಯ. ಈವತ್ತಿಗೂ ಖರ್ಗೆ, ಪರಮೇಶ್ವರ್ ಕಾಂಗ್ರೆಸ್ ಪಕ್ಷದಲ್ಲಿ ಮುಂದಕ್ಕೆ ಬರಲು ಬಿಡಲ್ಲ. ಬಿಜೆಪಿ ಕಡಿಮೆ ಸಮಯ ಅಧಿಕಾರ ನಡೆಸಿದ್ದರೂ ದಲಿತ, ಮುಸ್ಲಿಮರಿಗೆ ಹೆಚ್ಚು ಅವಕಾಶಗಳನ್ನು ಕೊಟ್ಟಿದೆ.
ಮುಸ್ಲಿಂ ಆಗಿದ್ದ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ. ದಲಿತರಾದ ಕೋವಿಂದ್ ಅವರನ್ನು ಈ ಬಾರಿ ರಾಷ್ಟ್ರಪತಿ ಮಾಡಿದ್ದೇವೆ. ಅವರು ಕೇಳದೇ ಇದ್ದರೂ ಗೋವಿಂದ ಕಾರಜೋಳರನ್ನು ರಾಜ್ಯದಲ್ಲಿ ಡಿಸಿಎಂ ಮಾಡಿದ್ದೇವೆ. ಆನೇಕಲ್ ವಿಧಾನಸಭೆಯಲ್ಲಿ ಸೋತ ಎ.ನಾರಾಯಣಸ್ವಾಮಿ ಅವರನ್ನು ಚಿತ್ರದುರ್ಗದಲ್ಲಿ ಸಂಸದರನ್ನಾಗಿಸಿದ್ದೇವೆ. ಸಂಸದ ಎ.ನಾರಾಯಣಸ್ವಾಮಿಗೆ ಈ ಬಾರಿ ಮಂತ್ರಿಯನ್ನಾಗಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ದಲಿತ ದಾಳಕ್ಕೆ ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿದ್ಧರಾಮಯ್ಯ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರ ಯಾರು ಮಾಡಲು ಸಾಧ್ಯ. ಸಿದ್ಧರಾಮಣ್ಣ ಅರ್ಕಾವತಿ ಪ್ರಕರಣವನ್ನೇ ಮುಚ್ಚಿ ಹಾಕಿದ್ದಾರೆ. ತಮ್ಮದು ಹೊರಬರುತ್ತೆ ಅಂತ ಲೋಕಾಯುಕ್ತ ತೆಗೆದು ಎಸಿಬಿ ಮಾಡಿದ್ದೇ ಸಿದ್ದರಾಮಯ್ಯ ಸರಕಾರ ಎಂದರು ನಳಿನ್.
ನಮ್ಮಲ್ಲಿ ಮಿತ್ರ ಮಂಡಳಿ, ವಲಸಿಗ ಎಂಬ ಭೇದ ಸರಿಯಲ್ಲ. ಎಲ್ಲರೂ ಬಿಜೆಪಿಯಿಂದ ಶಾಸಕರಾಗಿದ್ದಾರೆ, ಪಕ್ಷವೇ ಒಂದು ಮಂಡಳಿ. ಯಡಿಯೂರಪ್ಪ ರಾಷ್ಟ್ರೀಯ ನಾಯಕರ ಸೂಚನೆ ಪಾಲಿಸುವುದಾಗಿ ಹೇಳಿದ್ದಾರೆ. ಮೇಲಿಂದ ಏನು ಸೂಚನೆ ಬರುತ್ತೋ ಅದನ್ನು ನಾವು ಪಾಲಿಸುತ್ತೇವೆ. ಸಿಎಂ ಈಗಾಗಲೇ ನೆರೆ ವೀಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಿಎಂ ಬದಲಾವಣೆ ಆಗುತ್ತೋ ಇಲ್ಲವೋ ಎಂಬುದನ್ನು ರಾಷ್ಟ್ರೀಯ ಅಧ್ಯಕ್ಷರು ಹೇಳುತ್ತಾರೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
BJP President Nalin Kumar Kateel reacts in Chitradurga to Senior Congress leader Siddaramaiah's statement that Dalits should be made as CM of Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm