ಬ್ರೇಕಿಂಗ್ ನ್ಯೂಸ್
27-07-21 04:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನ ಏಳು ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಚಾರ್ವಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ತೆಲಂಗಾಣದ ಸಂಹಿತಾ ಪುಂಗವನಮ್ ಪ್ರಥಮ ಸ್ಥಾನ ಗಳಿಸಿದ್ದು, ಪಿಲಿಪ್ಪೈನ್ಸ್ ನ ವೆಂಟುರಾ ತಾಲಿಯಾ ತೃತೀಯ ಸ್ಥಾನ ಗಳಿಸಿದ್ದಾರೆ.
ಹತ್ತು ದಿನಗಳ ಹಿಂದಷ್ಟೇ ನಡೆದಿದ್ದ ಭಾರತದ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಚಾರ್ವಿ, ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಕೊನೆಯ ಸುತ್ತಿನ ವರೆಗೂ ಪ್ರಥಮ ಸ್ಥಾನದಲ್ಲಿದ್ದರು.
ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ಸಂಹಿತಾರಿಂದ ಪ್ರಬಲ ಪೈಪೋಟಿ ಎದುರಿಸಿದ್ದ ಚಾರ್ವಿ ಚಿನ್ನದ ಪದಕದ ಸನಿಹದಲ್ಲಿದ್ದರು. ಕೊನೆಯಲ್ಲಿ ಇಬ್ಬರೂ ತಲಾ 8 ಅಂಕ ಗಳಿಸಿದಾಗ ಟೈ ಬ್ರೇಕರ್ ಆಧಾರದ ಮೇಲೆ ಚಾರ್ವಿ ಎರಡನೇ ಸ್ಥಾನ ಹಾಗೂ ರಜತ ಪದಕಕ್ಕೆ ತೃಪ್ತಿ ಪಡಬೇಕಾಯಿತು. ಅದೇ ಪಂದ್ಯಾವಳಿಯ ತಂಡ ವಿಭಾಗದಲ್ಲಿ ಚಾರ್ವಿ ಪ್ರತಿನಿಧಿಸಿದ 4 ಜನರ ಭಾರತೀಯ ತಂಡ ಚಿನ್ನದ ಪದಕ ಗಳಿಸಿದೆ.
ಈ ಸಾಧನೆಯ ಮುಖಾಂತರ ಆಗಸ್ಟ್ ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಅಂಡರ್ -7 ವಿಭಾಗದಲ್ಲಿ ಚಾರ್ವಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಲಿದ್ದಾರೆ. ಇದೇ ಪಂದ್ಯಾವಳಿಯ ಹತ್ತು ವರ್ಷದ ಒಳಗಿನವರ ವಿಭಾಗದಲ್ಲಿ ಕೂಡ ಚಾರ್ವಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.
ಮೂಲತಃ ಶ್ರವಣಬೆಳಗೊಳದ ಜಿನೇನಹಳ್ಳಿಯ ಅನಿಲ್ ಕುಮಾರ್ ಹಾಗೂ ಅಖಿಲಾ ಅವರ ಪುತ್ರಿಯಾಗಿರುವ ಚಾರ್ವಿ, ಕಳೆದ ಎರಡೂವರೆ ವರ್ಷಗಳಿಂದ ಮಲ್ಲೇಶ್ವರಂನ ಕರ್ನಾಟಕ ಚೆಸ್ ಅಕಾಡೆಮಿಯಲ್ಲಿ ಚದುರಂಗ ಅಭ್ಯಾಸ ಮಾಡುತ್ತಿದ್ದಾರೆ.
ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಿವಾನಂದ ಬಿ.ಎಸ್ ಚಾರ್ವಿಯ ಮುಖ್ಯ ತರಬೇತುದಾರರಾಗಿದ್ದು, ಇನ್ನೋರ್ವ ಖ್ಯಾತ ಆಟಗಾರ ಗಹನ್ ಎಂ.ಜಿ ಸಹಾಯಕ ತರಬೇತುದಾರರಾಗಿ ಚಾರ್ವಿಗೆ ಮಾರ್ಗದರ್ಶನ
ನೀಡುತ್ತಿದ್ದಾರೆ.
Asian Chess Championship 2021 seven-year-old Charvi runner up in the finals. Charvi is from Hassan. 10 days back Chravi had won first place at Indian State Championship.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 08:46 pm
Mangalore Correspondent
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm