ಬ್ರೇಕಿಂಗ್ ನ್ಯೂಸ್
27-07-21 04:44 pm Headline Karnataka News Network ಕರ್ನಾಟಕ
ರಾಮನಗರ, ಜುಲೈ 27: ಮುಂದೆ ಜೆಡಿಎಸ್ ಗೆ ಒಳ್ಳೆಯ ಭವಿಷ್ಯ ಇದೆ. ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆಗಿದ್ದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ. ಆದರೆ ಮುಂದೆ ನನಗೆ ವಿಶ್ವಾಸವಿದೆ, ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ್ದಾರೆ. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ. ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್ ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವ ಮಧ್ಯೆ ಅಗತ್ಯ ಬಿದ್ದರೆ ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ ಎಂಬ ಸುದ್ದಿಯ ನಡುವೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬಿಜೆಪಿಯ ಹೊಸ ಸಿಎಂ ಆಯ್ಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡಲಿದೆ ಎಂದು ಹೇಳಿದರು.

ಯಡಿಯೂರಪ್ಪ ಪರವಾಗಿ ಕಾಂಗ್ರೆಸ್ ನಾಯಕರ ಬ್ಯಾಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಒಂದು ಸಮುದಾಯದ ಓಲೈಕೆಗಾಗಿ ಮಾಡ್ತಿರುವ ಪ್ರಯತ್ನ. ಈಗಾಗಲೇ ಮುಂದಿನ ಸಿಎಂ ಗೆ ಟವೆಲ್ ಹಾಕಿರುವವರು ಹೇಳ್ತಾರೆ. ಈಗಿದ್ದ ಸಿಎಂ ಭ್ರಷ್ಟರು, ಮುಂದೆ ಬರುವವರು ಭ್ರಷ್ಟರೇ ಎಂದು ಹೇಳ್ತಾರೆ. ಆದರೆ ಮತ್ತೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡ್ತಾರೆ. ಆದರೆ ಈಗ ಅವರ ಪರವಾಗಿ ಮಾತನಾಡ್ತಿರೋದು ಸಮುದಾಯದ ಓಲೈಕೆಗಾಗಿ ಅಷ್ಟೇ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಈ ಬೆಳವಣಿಗೆಯನ್ನ ಜೆಡಿಎಸ್ ಲಾಭದ ಬಗ್ಗೆ ಚಿಂತನೆ ಮಾಡಲ್ಲ. ಜನರ ಪರವಾಗಿ ಸರ್ಕಾರ ಚಿಂತಿಸಲಿ ಎಂದು ಹೇಳ್ತೇನೆ. ಈ ರೀತಿಯ ಬೆಳವಣಿಗೆಯಿಂದ ಜನರಿಗೆ ಪೆಟ್ಟಾಗಬಾರದು ಎಂದು ಹೇಳಿದರು.
Chamundi will give me position once again in politics says HDK in Ramnagara.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm