ಬ್ರೇಕಿಂಗ್ ನ್ಯೂಸ್
27-07-21 09:10 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು ರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆಯೇ ನಮ್ಮ ಸರ್ಕಾರದ ಹೊಣೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿದ ಬೇಕಿದೆ ಎಂದಿದ್ದಾರೆ.
ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಶಾಸಕಾಂಗ ಸಭೆ ಕರೆದು ಸಿಎಂ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನನ್ನ ಹೆಸರನ್ನು ಸೂಚಿಸುವ ಮೂಲಕ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ.
ಕರ್ನಾಟಕ ಸರ್ಕಾರವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ಶಾಸಕರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ನಾನು ನಂಬಿಕೆ ಹುಸಿಗೊಳಿಸಲ್ಲ ಎಂದಿದ್ದಾರೆ.
ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನನ್ನನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವ ಧನ್ಯವಾದಗಳು. ನನ್ನ ಹೆಸರು ಸೂಚಿಸಿ ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದಾರೆ ಎಂದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿ ಅವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ್ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ಅಷ್ಟೇ ಅಲ್ಲದೆ ಯಡಿಯೂರಪ್ಪ ಸರಕಾರದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಅನುಭವ ಮತ್ತು ಲಿಂಗಾಯತ ಕೋಟಾ ಅನುಸಾರ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ. ಅಲ್ಲದೆ, ಬಿಎಸ್ವೈ ಅವರನ್ನು ಪದಚ್ಯುತಿಗೊಳಿಸಿದ ಅಪಕೀರ್ತಿ ತಪ್ಪಿಸಲು ಅವರ ಆಪ್ತನನ್ನೇ ಸಿಎಂ ಮಾಡಲಾಗಿದೆ ಎನ್ನಲಾಗುತ್ತಿದೆ.
The Karnataka BJP legislature party on Tuesday elected Basavaraj Bommai as its new leader and he will succeed outgoing Chief Minister BS Yediyurappa.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm