ಬ್ರೇಕಿಂಗ್ ನ್ಯೂಸ್
04-09-20 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 4: ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಂದಿಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ವಾರದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಹೇಳಿಸಿಕೊಂಡು ಬರಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ, ಸಿಎಂ ಯಡಿಯೂರಪ್ಪ ಪಿತೃಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಆನಂತ್ರವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಹಾಗೆ ಆದಲ್ಲಿ ಸೆಪ್ಟಂಬರ್ 17 ಕ್ಕೆ ಪಿತೃ ಪಕ್ಷ ಮುಗಿಯುತ್ತದೆ. ಇದಾದ ಬಳಿಕ ಅಂದರೆ ಸೆ.18- 19ರ ವೇಳೆಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ನಿಚ್ಚಳ ಎನ್ನಲಾಗ್ತಿದೆ. ಅದಕ್ಕೂ ಮುನ್ನ ಸೆ.13 ಅಥವಾ 14 ಕ್ಕೆ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ವಲಸಿಗರ ಪೈಕಿ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಎಂಬಿಟಿ ಹಾಗೂ ಆರ್. ಶಂಕರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಅಲ್ಲದೆ, ಮೂಲ ಬಿಜೆಪಿಯಿಂದ ಅರವಿಂದ ಲಿಂಬಾವಳಿ ಹಾಗೂ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
ಸಂಪುಟ ವಿಸ್ತರಣೆಯ ಮಾತು ಬಂದಾಗ, ಪುನಾರಚನೆ ಆಗಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಸದ್ಯ ವಿಸ್ತರಣೆಯನ್ನು ಮಾಡಿ ಡಿಸೆಂಬರ್ ಕೊನೆಯಲ್ಲಿ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನುತ್ತದೆ ಮಾಹಿತಿ. ಈ ನಡುವೆ ಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಬೇರೆ ಬೇರೆ ಕಡೆಯಿಂದ ಪೈಪೋಟಿಯೂ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದು ಕೊನೆಕ್ಷಣದಲ್ಲಿ ಯಾರಿಗೆ ಸ್ಥಾನ ಸಿಗಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm