ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm