ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm