ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm