ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm