ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm