ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am