ಬ್ರೇಕಿಂಗ್ ನ್ಯೂಸ್
07-08-21 01:33 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಸಿಎಂ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಕಡೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ, ಆರಗ ಜ್ಞಾನೇಂದ್ರ ಅವರಿಗೆ ಗೃಹ ಇಲಾಖೆ ನೀಡಲಾಗಿದೆ. ಸುರೇಶ್ ಕುಮಾರ್ ಕೈಯಲ್ಲಿದ್ದ ಶಿಕ್ಷಣ ಖಾತೆಯನ್ನು ಬಿ.ಸಿ.ನಾಗೇಶ್ ಗೆ ಕೊಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಅವರಿಗೆ ವಹಿಸಲಾಗಿದೆ.




ಮುರುಗೇಶ್ ನಿರಾಣಿಗೆ ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೆ, ಸಿಸಿ ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ನೀಡಲಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಪರ್ ಪಡೆದಿದ್ದು, ಇಂಧನ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ವಹಿಸಲಾಗಿದೆ. ಕಳೆದ ಬಾರಿ ಲೋಕೋಪಯೋಗಿ ಇಲಾಖೆ ಹೊಂದಿದ್ದ ಗೋವಿಂದ ಕಾರಜೋಳಗೆ ಜಲಸಂಪನ್ಮೂಲ ಖಾತೆ ವಹಿಸಲಾಗಿದೆ. ಕೆ.ಎಸ್. ಈಶ್ವರಪ್ಪ ಅವರನ್ನು ಈ ಹಿಂದೆ ಇದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯಲ್ಲೇ ಉಳಿಸಲಾಗಿದೆ.


ಬಿ.ಶ್ರೀರಾಮುಲು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ವಿ.ಸೋಮಣ್ಣ ವಸತಿ ಮತ್ತು ಮೂಲಸೌಕರ್ಯ, ಆರ್.ಅಶೋಕ್ - ಕಂದಾಯ, ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ, ಎಸ್- ಅಂಗಾರ – ಮೀನುಗಾರಿಕೆ ಮತ್ತು ಬಂದರು, ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಆನಂದ ಸಿಂಗ್ – ಪರಿಸರ, ಪ್ರವಾಸೋದ್ಯಮ, ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿವರಾಮ ಹೆಬ್ಬಾರ್ – ಕಾರ್ಮಿಕ


ಎಸ್.ಟಿ.ಸೋಮಶೇಖರ್ – ಸಹಕಾರ, ಬಿ.ಸಿ.ಪಾಟೀಲ್- ಕೃಷಿ, ಬೈರತಿ ಬಸವರಾಜು – ನಗರಾಭಿವೃದ್ಧಿ, ಡಾ.ಕೆ.ಸುಧಾಕರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ – ಅಬಕಾರಿ, ಶಶಿಕಲಾ ಜೊಲ್ಲೆ – ಮುಜರಾಯಿ, ವಕ್ಫ್, ಎಂಟಿಬಿ ನಾಗರಾಜು – ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಕೆ.ಸಿ.ನಾರಾಯಣ ಗೌಡ – ರೇಷ್ಮೆ ಯುವ ಸಬಲೀಕರಣ, ಕ್ರೀಡೆ, ಬಿ.ಸಿ. ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸುನಿಲ್ ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ, ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಶಂಕರ ಪಾಟೀಲ್ ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ ಖಾತೆ, ಮುನಿರತ್ನ – ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನೀಡಲಾಗಿದೆ.
Karnataka Chief Minister Basavaraj Bommai on Friday allocated portfolios to 29 ministers inducted into his new cabinet. While the CM kept the key portfolios of finance, Bengaluru development and cabinet affairs, core BJP MLAs secured prime berths in Bommai’s cabinet.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm