ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am