ಬ್ರೇಕಿಂಗ್ ನ್ಯೂಸ್
11-08-21 08:45 am Bengaluru Correspondent ಕರ್ನಾಟಕ
ವಿಜಯನಗರ, ಆಗಸ್ಟ್ 11: ತಮ್ಮ ಸಚಿವ ಸ್ಥಾನದ ಬಗ್ಗೆ ತೀವ್ರ ಮುನಿಸಿಕೊಂಡಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೊಸಪೇಟೆಯ ತಮ್ಮ ಕಚೇರಿಯನ್ನು ಮಂಗಳವಾರ ರಾತ್ರಿ ದಿಢೀರ್ ತೆರವು ಮಾಡಿದ್ದು ಅದರ ನಾಮಫಲಕ ತೆಗೆದು ಹಾಕಲಾಗಿದೆ.
ಅಲ್ಲದೆ, ಆ.11ರಿಂದ ಕಚೇರಿಯಲ್ಲಿ ಯಾವುದೇ ಸಾರ್ವಜನಿಕರ ಅಹವಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಕಚೇರಿ ಬಂದ್ ಕುರಿತು ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ಏನು ಹೇಳಬೇಕಿತ್ತೋ ಅದನ್ನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದಿದ್ದಾರೆ.


ಎರಡು ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಅವರನ್ನು ಸಚಿವ ಸ್ಥಾನದ ವಿಚಾರದಲ್ಲಿ ಭೇಟಿಯಾಗಿದ್ದ ಆನಂದ ಸಿಂಗ್, ಬೇರೆ ಖಾತೆ ನೀಡಲು ಪಟ್ಟು ಹಿಡಿದಿದ್ದರು. ಅಲ್ಲದೆ ಎರಡು ದಿನಗಳ ಗಡುವನ್ನೂ ನೀಡಿದ್ದರು. ಇದೀಗ ಸಿಎಂ ಕಡೆಯಿಂದ ಸ್ಪಂದನೆ ಸಿಕ್ಕಿರದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಬೇಡಿಕೆ ಈಡೇರದಿದ್ದರೆ ಆ. 15ರಂದು ಧ್ವಜಾರೋಹಣವನ್ನೂ ಮಾಡದಿರಲು ಆನಂದ ಸಿಂಗ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆ ನೀಡಲಾಗಿದೆ. ಆದರೆ ಈ ಖಾತೆ ಬೇಡ ಎನ್ನುತ್ತಿರುವ ಆನಂದ್ ಸಿಂಗ್, ಖಾತೆಗಳ ಜವಾಬ್ದಾರಿ ವಹಿಸಿಕೊಳ್ಳದೆ ಮುನಿಸಿಕೊಂಡಿದ್ದಾರೆ.
14 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಹೊಸಪೇಟೆಯ ರಾಣಿಪೇಟ್ ಎಂಬಲ್ಲಿದ್ದ ಶಾಸಕರ ಕಚೇರಿಯನ್ನು ತೆರವು ಮಾಡಿದ್ದು ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡುವ ಸೂಚನೆ ಎನ್ನಲಾಗಿದೆ. ಇತರ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿರುವ ಆನಂದ್ ಸಿಂಗ್, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೋ ಮತ್ತೆ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಾರೋ ಎನ್ನುವ ಕುತೂಹಲ ಎದ್ದಿದೆ. ಕಳೆದ ಬಾರಿ ಬಿಜೆಪಿ ಸರಕಾರ ಬರಲು ಆನಂದ್ ಸಿಂಗ್ ಕೂಡ ಕಾರಣರಾಗಿದ್ದರು. ಇದೇ ವಿಚಾರದಲ್ಲಿ ಯಡಿಯೂರಪ್ಪ ಸರಕಾರ ಇದ್ದಾಗ ಒತ್ತಡ ತಂತ್ರ ಅನುಸರಿಸಿ ಸಚಿವರಾಗಿದ್ದರು. ಆದರೆ ಈ ಬಾರಿ ಪ್ರಮುಖ ಖಾತೆಯ ಮೇಲೆ ಕಣ್ಣಿಟ್ಟಿದ್ದರು.
Anand Singh dissatisfaction with his portfolio Likely To Resign Closes MLA Office In Hospet. Just as Chief Minister Basavaraj Bommai allocated ministerial berths, B.S. Anand Singh, MLA for Vijayanagar, expressed his discontentment over the Tourism portfolio allocated to him.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm