ಬ್ರೇಕಿಂಗ್ ನ್ಯೂಸ್
11-08-21 09:36 pm Headline Karnataka Political Bureau ಕರ್ನಾಟಕ
ಬೆಳಗಾವಿ, ಆಗಸ್ಟ್ 11: ಒಂದು ತೆಗೆದ್ರೆ ಎರಡು ತೆಗೀತೀವಿ, ನಾವೀಗ ಪ್ರಬಲರಾಗಿದ್ದೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ನಿನ್ನೆಯಷ್ಟೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಿದ್ದರು. ಇಂದು ಬೆಳಗಾವಿಗೆ ತೆರಳಿದ್ದ ಈಶ್ವರಪ್ಪ ಹೊಸ ರಾಗ ಎಳೆದಿದ್ದಾರೆ. ನನಗೆ ಬಿಪಿ, ಶುಗರ್ ಸಮಸ್ಯೆ ಇಲ್ಲ. ನನ್ನ ತಂಟೆಗೆ ಬಂದವರಿಗೆ ಬಿಪಿ ಶುಗರ್ ಬಂದೇ ಬರುತ್ತದೆ ಎಂದು ಶಾಪ ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ನಾಗಪುರದ ಯೂನಿವರ್ಸಿಟಿಯಲ್ಲಿ ಕಲಿತು ಬಂದವನು ಎಂದು ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಹೇಳಿದ್ದಾರೆ. ಅಲ್ಲಿ ಕಲಿತು ಬಂದಿದ್ದರಿಂದಲೇ ಒಳ್ಳೆಯ ಸಂಸ್ಕಾರ ಬೆಳೆಸಿಕೊಂಡಿದ್ದೇನೆ. ಶಿವಮೊಗ್ಗದ ಜನರು ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಜಗತ್ತು ಮೆಚ್ಚಿಕೊಂಡಿರುವ ಮೋದಿ ಬಗ್ಗೆ ಅವರ ಹೆಸರನ್ನು ಶೌಚಾಲಯಕ್ಕೆ ಇಡಬೇಕು ಎಂದ ಕಾಂಗ್ರೆಸಿಗರ ಸಂಸ್ಕೃತಿ ಎಂಥದ್ದು. ಇವರು ಇಟಲಿ ಯೂನಿವರ್ಸಿಟಿಯಲ್ಲಿ ಓದಿ ಬಂದವರೆಲ್ಲ ಇದನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಮೋದಿ ಬಗ್ಗೇ ಕೇವಲವಾಗಿ ಮಾತನಾಡಿದ್ದರಿಂದ ಸಿಟ್ಟು ಬಂದು ಆ ರೀತಿಯ ಪದ ಬಳಸಿದ್ದೆ. ಆದರೆ ತಪ್ಪು ಅರಿವಾಗಿ ಪದವನ್ನು ಹಿಂದಕ್ಕೆ ಪಡೆದಿದ್ದೇನೆ. ಆದರೆ ಕಾಂಗ್ರೆಸಿನವರು ಅದನ್ನೇ ರಾಜಕಾರಣಕ್ಕೆ ಬಳಸಿಕೊಂಡರೆ ಏನು ಮಾಡಲು ಬರುತ್ತದೆ ಎಂದು ಕೇಳಿದ ಈಶ್ವರಪ್ಪ, ವಾಜಪೇಯಿ, ದೀನದಯಾಳ ಉಪಾಧ್ಯಾಯ, ಸಾವರ್ಕರ್ ಫೋಟೋಗಳಿಗೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸಿಗರ ಸಂಸ್ಕೃತಿ ಏನು ಎಂದು ಪ್ರಶ್ನೆ ಮಾಡಿದರು.
ಜೆಡಿಎಸ್ ಬಗ್ಗೆ ಬಿಜೆಪಿ ಮೃದು ಧೋರಣೆ ತಳೆದಿದೆಯೇ ಎಂಬ ಪ್ರಶ್ನೆಗೆ, ಏನು ಮಾಡೋಣ ಸ್ವಾಮಿ.. ಕುಮಾರಸ್ವಾಮಿ ಅವರನ್ನು ಕರ್ಕೊಂಡು ಬಂದು ಹೊಡಿಯೋಕ್ಕಾಗುತ್ತಾ.. ಅವರ ರಾಜಕೀಯ ಅವ್ರು ಮಾಡ್ತಾರೆ. ನಾವು ನಮ್ಮದನ್ನು ಮಾಡುತ್ತೇವೆ. ಜೆಡಿಎಸ್ ಬೆಂಬಲ ಪಡೆಯುವ ಅಗತ್ಯ ನಮಗಿಲ್ಲ. ಬಿಜೆಪಿ ಅಧಿಕಾರ ಪೂರೈಸುತ್ತದೆ. ಸಿದ್ದರಾಮಯ್ಯ ಸರ್ಕಾರ ಬಿದ್ದು ಹೋಗುತ್ತೆ ಎಂದು ಕೆಟ್ಟ ಕನಸು ಕಾಣುತ್ತಿದ್ದಾರೆ. ಅದೇನೂ ನನಸಾಗುವುದಿಲ್ಲ ಎಂದು ಹೇಳಿದರು.
K S Eshwarappa asks apology after sparking row using abusive language.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am