ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am