ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm