ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm