ಬ್ರೇಕಿಂಗ್ ನ್ಯೂಸ್
06-09-20 01:20 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಉದ್ಯಾನದಲ್ಲಿ ಸ್ಪೋರ್ಟ್ಸ್ ಉಡುಗೆ ಧರಿಸಿ ಹುಲಾ ಹೂಪ್ ಪ್ರಾಕ್ಟಿಸ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದ್ದ ನಟಿ ಸಂಯುಕ್ತಾ ಹೆಗ್ಡೆ ಪರವಾಗಿ ನಟ ನವರಸನಾಯಕ ಜಗ್ಗೇಶ್ ಮಾತನಾಡಿದ್ದಾರೆ.
ಈಗಷ್ಟೇ ನಟಿ ರಮ್ಯಾ ಸಹ ಸಂಯುಕ್ತಾ ಹೆಗ್ಡೆ ಟ್ವೀಟ್ ರೀಟ್ವಿಟ್ ಮಾಡಿಕೊಂಡು, ‘ಪೂರ್ತಿ ವಿಡಿಯೋವನ್ನು ನಾನು ನೋಡಿದ್ದೇನೆ. ಸಂಯುಕ್ತಾ ಮತ್ತು ಆಕೆಯ ಫ್ರೆಂಡ್ಸ್ ಅನ್ನು ನಡೆಸಿಕೊಂಡ ರೀತಿ ನೋಡಿ ನನಗೆ ಶಾಕ್ ಆಯಿತು. ಕಾರಣ ಏನೇ ಇರಬಹುದು ಆದರೆ, ನೈತಿಕ ಪೊಲೀಸ್ ಗಿರಿ, ಇನ್ನೊಬ್ಬರನ್ನು ನಿಂದಿಸುವ ಹಕ್ಕು ಯಾರಿಗೂ ಇಲ್ಲ ಎಂದಿದ್ದರು. ಇದೀಗ ಜಗ್ಗೇಶ್ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಜಾಲತಾಣಗಳಲ್ಲಿ ಮೊಬೈಲ್ ರೆಕಾರ್ಡ್ ಶುರು ಮಾಡಿ, ಕಾಲುಕೆರೆದು ಬರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇಂದು ಬಾಪ್ ಕಟ್, ಪ್ಯಾಂಟ್ ಶರ್ಟಿನ ಹೆಂಗಸು ಅನ್ಯಳ ಬಟ್ಟೆ ಬಗ್ಗೆ ಬುದ್ಧಿ ಹೇಳುವಂತೆ ಕೈಮಾಡಿ ರೆಕಾರ್ಡ್ ಮಾಡುತ್ತಾಳೆ. ನಾವು ನೋಡಿ ಪರವಿರೋಧ ಚರ್ಚೆ ಮಾಡುತ್ತೇವೆ. ಸಮಾಜದ ಡೊಂಕು ತಿದ್ದುವ ಮೊದಲು ನಾವು ಸರಿ ಇರಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಅಷ್ಟಕ್ಕೂ ಆಗಿದ್ದೇನೆಂದರೆ, ಶುಕ್ರವಾರ ಸಂಜೆ ನಗರದ ಅಗರ ಕೆರೆ ಬಳಿ ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್ನಲ್ಲಿ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಕ್ರೀಡಾ ಉಡುಗೆ ತೊಟ್ಟು ಹುಲಾ ಹೂಪ್ ಡಾನ್ಸ್ ಮಾಡಿದ್ದಾರೆ. ಹಾಗೆ ಬಟ್ಟೆ ತೊಟ್ಟು ನೃತ್ಯ ಮಾಡಿದ್ದಕ್ಕೆ ಸ್ಥಳೀಯರು ಗರಂ ಆಗಿ, ‘ಇದೇನು ಕ್ಯಾಬರೇನಾ? ಇಂಥ ಬಟ್ಟೆ ತೊಡಬೇಡಿ’ ಎಂದು ಸಂಯುಕ್ತಾ ಮತ್ತವರ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು.
ಇತ್ತ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಸಂಯುಕ್ತಾ ಪರಿಸ್ಥಿತಿ ವಿವರಿಸಿದ್ದಾರೆ. ನಮ್ಮದೇನು ತಪ್ಪಿಲ್ಲ, ಕ್ರೀಡೆಯ ಉಡುಗೆ ತೊಟ್ಟು ಹುಲಾ ಪ್ರಾಕ್ಟಿಸ್ ಮಾಡಿದ್ದೇ ತಪ್ಪಾ ಎಂದು ಕಣ್ಣೀರಿಟ್ಟಿದ್ದರು. ಬಳಿಕ ಪೊಲೀಸರ ಸಮ್ಮುಖದಲ್ಲಿ ಪರಿಸ್ಥಿತಿ ಶಾಂತಗೊಳಿಸಲಾಯಿತು.
Join our WhatsApp group for latest news updates
ಕೋಪ ದುಃಖಕ್ಕೆಮೂಲ!
— ನವರಸನಾಯಕ ಜಗ್ಗೇಶ್ (@Jaggesh2) September 5, 2020
ಸಮಾಜದಡೊಂಕು ತಿದ್ದುವ ಮೊದಲು ನಾವು ಸರಿಯಿರಬೇಕು!
ಇತ್ತೀಚಗೆ ಜಾಲತಾಣಪ್ರಚಾರಕ್ಕೆ ಮೊಬೈಲ್ ರೆಕಾರ್ಡ ಚಾಲುಮಾಡಿ ಕಾಲುಕೆರದು ಬರುವವರ ಸಂಖ್ಯೆ ಜಾಸ್ತಿಆಗುತ್ತಿದೆ!ಇಂದು ಬಾಪ್ ಕಟ್ ಪ್ಯಾಂಟ್ ಶರ್ಟಿನ ಹೆಂಗಸು
ಅನ್ಯಳ ಬಟ್ಟೆಬಗ್ಗೆ ಬುದ್ದಿ ಹೇಳುವಂತೆ ಕೈಮಾಡಿ ರೆಕಾರ್ಡ ಮಾಡುತ್ತಾಳೆ!ನಾವು ನೋಡಿ ಪರವಿರೋಧ ಚರ್ಚೆಮಾಡುತ್ತೇವೆ😜 pic.twitter.com/Fz0Fbaqbyt
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm