ಬ್ರೇಕಿಂಗ್ ನ್ಯೂಸ್
06-09-20 01:20 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಉದ್ಯಾನದಲ್ಲಿ ಸ್ಪೋರ್ಟ್ಸ್ ಉಡುಗೆ ಧರಿಸಿ ಹುಲಾ ಹೂಪ್ ಪ್ರಾಕ್ಟಿಸ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದ್ದ ನಟಿ ಸಂಯುಕ್ತಾ ಹೆಗ್ಡೆ ಪರವಾಗಿ ನಟ ನವರಸನಾಯಕ ಜಗ್ಗೇಶ್ ಮಾತನಾಡಿದ್ದಾರೆ.
ಈಗಷ್ಟೇ ನಟಿ ರಮ್ಯಾ ಸಹ ಸಂಯುಕ್ತಾ ಹೆಗ್ಡೆ ಟ್ವೀಟ್ ರೀಟ್ವಿಟ್ ಮಾಡಿಕೊಂಡು, ‘ಪೂರ್ತಿ ವಿಡಿಯೋವನ್ನು ನಾನು ನೋಡಿದ್ದೇನೆ. ಸಂಯುಕ್ತಾ ಮತ್ತು ಆಕೆಯ ಫ್ರೆಂಡ್ಸ್ ಅನ್ನು ನಡೆಸಿಕೊಂಡ ರೀತಿ ನೋಡಿ ನನಗೆ ಶಾಕ್ ಆಯಿತು. ಕಾರಣ ಏನೇ ಇರಬಹುದು ಆದರೆ, ನೈತಿಕ ಪೊಲೀಸ್ ಗಿರಿ, ಇನ್ನೊಬ್ಬರನ್ನು ನಿಂದಿಸುವ ಹಕ್ಕು ಯಾರಿಗೂ ಇಲ್ಲ ಎಂದಿದ್ದರು. ಇದೀಗ ಜಗ್ಗೇಶ್ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಜಾಲತಾಣಗಳಲ್ಲಿ ಮೊಬೈಲ್ ರೆಕಾರ್ಡ್ ಶುರು ಮಾಡಿ, ಕಾಲುಕೆರೆದು ಬರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇಂದು ಬಾಪ್ ಕಟ್, ಪ್ಯಾಂಟ್ ಶರ್ಟಿನ ಹೆಂಗಸು ಅನ್ಯಳ ಬಟ್ಟೆ ಬಗ್ಗೆ ಬುದ್ಧಿ ಹೇಳುವಂತೆ ಕೈಮಾಡಿ ರೆಕಾರ್ಡ್ ಮಾಡುತ್ತಾಳೆ. ನಾವು ನೋಡಿ ಪರವಿರೋಧ ಚರ್ಚೆ ಮಾಡುತ್ತೇವೆ. ಸಮಾಜದ ಡೊಂಕು ತಿದ್ದುವ ಮೊದಲು ನಾವು ಸರಿ ಇರಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಅಷ್ಟಕ್ಕೂ ಆಗಿದ್ದೇನೆಂದರೆ, ಶುಕ್ರವಾರ ಸಂಜೆ ನಗರದ ಅಗರ ಕೆರೆ ಬಳಿ ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್ನಲ್ಲಿ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಕ್ರೀಡಾ ಉಡುಗೆ ತೊಟ್ಟು ಹುಲಾ ಹೂಪ್ ಡಾನ್ಸ್ ಮಾಡಿದ್ದಾರೆ. ಹಾಗೆ ಬಟ್ಟೆ ತೊಟ್ಟು ನೃತ್ಯ ಮಾಡಿದ್ದಕ್ಕೆ ಸ್ಥಳೀಯರು ಗರಂ ಆಗಿ, ‘ಇದೇನು ಕ್ಯಾಬರೇನಾ? ಇಂಥ ಬಟ್ಟೆ ತೊಡಬೇಡಿ’ ಎಂದು ಸಂಯುಕ್ತಾ ಮತ್ತವರ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು.
ಇತ್ತ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಸಂಯುಕ್ತಾ ಪರಿಸ್ಥಿತಿ ವಿವರಿಸಿದ್ದಾರೆ. ನಮ್ಮದೇನು ತಪ್ಪಿಲ್ಲ, ಕ್ರೀಡೆಯ ಉಡುಗೆ ತೊಟ್ಟು ಹುಲಾ ಪ್ರಾಕ್ಟಿಸ್ ಮಾಡಿದ್ದೇ ತಪ್ಪಾ ಎಂದು ಕಣ್ಣೀರಿಟ್ಟಿದ್ದರು. ಬಳಿಕ ಪೊಲೀಸರ ಸಮ್ಮುಖದಲ್ಲಿ ಪರಿಸ್ಥಿತಿ ಶಾಂತಗೊಳಿಸಲಾಯಿತು.
Join our WhatsApp group for latest news updates
ಕೋಪ ದುಃಖಕ್ಕೆಮೂಲ!
— ನವರಸನಾಯಕ ಜಗ್ಗೇಶ್ (@Jaggesh2) September 5, 2020
ಸಮಾಜದಡೊಂಕು ತಿದ್ದುವ ಮೊದಲು ನಾವು ಸರಿಯಿರಬೇಕು!
ಇತ್ತೀಚಗೆ ಜಾಲತಾಣಪ್ರಚಾರಕ್ಕೆ ಮೊಬೈಲ್ ರೆಕಾರ್ಡ ಚಾಲುಮಾಡಿ ಕಾಲುಕೆರದು ಬರುವವರ ಸಂಖ್ಯೆ ಜಾಸ್ತಿಆಗುತ್ತಿದೆ!ಇಂದು ಬಾಪ್ ಕಟ್ ಪ್ಯಾಂಟ್ ಶರ್ಟಿನ ಹೆಂಗಸು
ಅನ್ಯಳ ಬಟ್ಟೆಬಗ್ಗೆ ಬುದ್ದಿ ಹೇಳುವಂತೆ ಕೈಮಾಡಿ ರೆಕಾರ್ಡ ಮಾಡುತ್ತಾಳೆ!ನಾವು ನೋಡಿ ಪರವಿರೋಧ ಚರ್ಚೆಮಾಡುತ್ತೇವೆ😜 pic.twitter.com/Fz0Fbaqbyt
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm