ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am