ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm