ಬ್ರೇಕಿಂಗ್ ನ್ಯೂಸ್
23-08-21 11:52 am Headline Karnataka News Network ಕರ್ನಾಟಕ
ಬಾಗಲಕೋಟೆ, ಆಗಸ್ಟ್ 23: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ನಡುವೆ ತಾಲಿಬಾನ್ ಬೆಂಬಲಿಸಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಫೇಸ್ಬುಕ್ನಲ್ಲಿ ಐ ಲವ್ ತಾಲಿಬಾನ್ ಎಂದು ಪೋಸ್ಟ್ ಮಾಡಿದ್ದ ಆರೋಪಿ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಬಂಧಿಸಲಾಗಿದೆ.

ಈತ ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ ಐ ಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವಧರ್ಮಿಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ದೇಶದ್ರೋಹದ ಕೃತ್ಯ ಖಂಡಿಸಿ ಆತನನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪೋಸ್ಟ್ ವೈರಲ್ ಆದ ಬಳಿಕ ಆಸೀಫ್ ಗಲಗಲಿ ನಾಪತ್ತೆಯಾಗಿದ್ದ, ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆ ಸಂಬಂಧ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಸ್ಸಾಂನಲ್ಲಿ 14 ಮಂದಿಯ ಬಂಧನ;
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಮರಳಿ ಅಧಿಕಾರವನ್ನು ಪಡೆದಿರುವುದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಅಸ್ಸಾಂನ 11 ಜಿಲ್ಲೆಗಳಿಂದ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ 11 ಜಿಲ್ಲೆಗಳಿಂದ 14 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ತೇಝ್ ಪುರ್ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಯೂ ಸೇರಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿರುವುದಕ್ಕೆ ಕೆಲವರು ನೇರವಾಗಿ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಭಾರತವನ್ನು ಟೀಕಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಾಧ್ಯಮಗಳು ತಾಲಿಬಾನ್ ಅನ್ನು ಬೆಂಬಲಿಸುವುದಿಲ್ಲ. ಇದರ ಪರಿಣಾಮ ಕೋಮು ಘರ್ಷಣೆ ನಡೆಯಲು ಕಾರಣವಾಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಸಾಮಾಜಿಕ ಜಾಲತಾಣದ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದ ಅಸ್ಸಾಂ ಪೊಲೀಸ್ ಸೈಬರ್ ಸೆಲ್ ತಂಡ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದೆ. ತಾಲಿಬಾನ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತಂದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ವೈಯೊಲೆಟ್ ಬರುವಾ ತಿಳಿಸಿದ್ದಾರೆ.
I love Taliban post on facebook Bagalkot youth arrested by police. The arrest was made after massive opposition from Hindu organisations.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm