ಬ್ರೇಕಿಂಗ್ ನ್ಯೂಸ್
23-08-21 11:52 am Headline Karnataka News Network ಕರ್ನಾಟಕ
ಬಾಗಲಕೋಟೆ, ಆಗಸ್ಟ್ 23: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ನಡುವೆ ತಾಲಿಬಾನ್ ಬೆಂಬಲಿಸಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಫೇಸ್ಬುಕ್ನಲ್ಲಿ ಐ ಲವ್ ತಾಲಿಬಾನ್ ಎಂದು ಪೋಸ್ಟ್ ಮಾಡಿದ್ದ ಆರೋಪಿ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಬಂಧಿಸಲಾಗಿದೆ.

ಈತ ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ ಐ ಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವಧರ್ಮಿಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ದೇಶದ್ರೋಹದ ಕೃತ್ಯ ಖಂಡಿಸಿ ಆತನನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪೋಸ್ಟ್ ವೈರಲ್ ಆದ ಬಳಿಕ ಆಸೀಫ್ ಗಲಗಲಿ ನಾಪತ್ತೆಯಾಗಿದ್ದ, ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆ ಸಂಬಂಧ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಸ್ಸಾಂನಲ್ಲಿ 14 ಮಂದಿಯ ಬಂಧನ;
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಮರಳಿ ಅಧಿಕಾರವನ್ನು ಪಡೆದಿರುವುದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಅಸ್ಸಾಂನ 11 ಜಿಲ್ಲೆಗಳಿಂದ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ 11 ಜಿಲ್ಲೆಗಳಿಂದ 14 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ತೇಝ್ ಪುರ್ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಯೂ ಸೇರಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿರುವುದಕ್ಕೆ ಕೆಲವರು ನೇರವಾಗಿ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಭಾರತವನ್ನು ಟೀಕಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಾಧ್ಯಮಗಳು ತಾಲಿಬಾನ್ ಅನ್ನು ಬೆಂಬಲಿಸುವುದಿಲ್ಲ. ಇದರ ಪರಿಣಾಮ ಕೋಮು ಘರ್ಷಣೆ ನಡೆಯಲು ಕಾರಣವಾಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಸಾಮಾಜಿಕ ಜಾಲತಾಣದ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದ ಅಸ್ಸಾಂ ಪೊಲೀಸ್ ಸೈಬರ್ ಸೆಲ್ ತಂಡ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದೆ. ತಾಲಿಬಾನ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತಂದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ವೈಯೊಲೆಟ್ ಬರುವಾ ತಿಳಿಸಿದ್ದಾರೆ.
I love Taliban post on facebook Bagalkot youth arrested by police. The arrest was made after massive opposition from Hindu organisations.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm