ಬ್ರೇಕಿಂಗ್ ನ್ಯೂಸ್
23-08-21 04:19 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಸಿಎಂ ಅಂದರೆ ಕಾಮನ್ ಮ್ಯಾನ್. ಸಿನಿಮಾ ಥರ ಆರ್ಭಟಿಸಿದರೆ ಜನ ಕೇಳಬೇಕಲ್ಲಾ.. ಹೀಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸರಳ ಮಾತುಗಳಿಂದ ಜನಮನ ಸೂರೆಗೊಂಡ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ತುಂಬ ಲವಲವಿಕೆಯಿಂದ ಮಕ್ಕಳ ಜೊತೆ ಮಾತನಾಡಿದರು. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅವರು ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದ್ದು ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಎಲ್ಲರ ಮುಖದಲ್ಲೂ ನಗು ಮೂಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಹುಡುಗನೋರ್ವ “ನಾವು ತುಂಬ ಸಿನಿಮಾಗಳಲ್ಲಿ ನೋಡಿರುವ ಸಿಎಂ ಬೇರೆ ಬೇರೆ ಥರ ಇದ್ದರು. ನೀವೇನು ಸರ್ ಇಷ್ಟು ಸಿಂಪಲ್ ಆಗಿದ್ದೀರಲ್ಲಾ?” ಎಂದು ಪ್ರಶ್ನೆ ಹಾಕಿದನು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಿಎಂ ಸಾಹೇಬರು, ಅದು ಸಿನಿಮಾ ಕಣೋ. ಸಿನಿಮಾದಲ್ಲಿ ಆರ್ಭಟ ಇರಲೇಬೇಕು. ಹಾಗಿದ್ದಾಗಲೇ ಸಿನಿಮಾ ನೋಡೋಕೆ ಜನ ಬರೋದು. ಆದರೆ ನಿಜ ಜೀವನದಲ್ಲಿ ನಾವು ಆರ್ಭಟ ಮಾಡಿದರೆ ಜನರು ಕೇಳಲ್ಲ. ಹಾಗಾಗಿ ನಾವು ಇಲ್ಲಿ ಸಿಂಪಲ್ ಆಗಿ ಇರಲೇಬೇಕು.

ನಿಮ್ಮ ಫೇವರಿಟ್ ಹೀರೋಯಿನ್ ಯಾರು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದು ಬಹಳ ಕಷ್ಟದ ಪ್ರಶ್ನೆ. ಯಾಕೆಂದರೆ ಬಹಳ ಜನ ಇದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಬೇಜಾರಾಗುತ್ತದೆ. ನನ್ನ ಆಲ್ಟೈಮ್ ಫೇವರಿಟ್ ಹೀರೋಯಿನ್ ಮಧುಬಾಲ. ಕನ್ನಡದಲ್ಲಿ ಹೇಳುವುದಾದರೆ, ನಮ್ಮ ಕಾಲದ ಟಾಪ್ 3 ಹೀರೋಯಿನ್ಗಳಾದ ಕಲ್ಪನಾ, ಜಯಂತಿ ಮತ್ತು ಭಾರತಿ ನನ್ನ ಫೇವರಿಟ್. ಡಾ. ರಾಜ್ಕುಮಾರ್ ಅವರು ನನ್ನ ಆಲ್ಟೈಮ್ ಫೇವರಿಟ್ ಹೀರೋ.
ವೇದಿಕೆಯಲ್ಲಿ ತಮ್ಮ ಅಮ್ಮ ಮಾಡಿಕೊಡುತ್ತಿದ್ದ ಬಿಸಿ ಬಿಸಿ ಜೋಳದ ರೊಟ್ಟಿ ನೆನಪಿಸಿಕೊಂಡರು. ಇದೇ ವೇಳೆ, ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಬೊಮ್ಮಾಯಿ ಹೇಳಿದ್ದು ಎಲ್ಲರ ಗಮನಸೆಳೆಯಿತು.
ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ತುಂಬ ಖುಷಿಯಿಂದ ಮಾತಾಡಿದರು. ಅವರ ಈ ಸರಳತೆಯ ವಿಡಿಯೋ ವೈರಲ್ ಆಗುತ್ತಿದೆ.
Video: Click
CM Basavaraj Bommai talks about his Favorite Heroines on Zee Kannada stage.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm