ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm