ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.
ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.
ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm