ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am