ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm