ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm