ಬ್ರೇಕಿಂಗ್ ನ್ಯೂಸ್
02-09-21 04:16 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.2: ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ದೌರ್ಜನ್ಯ ಎಸಗಿ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಲ್ಲಿ ಪಿಎಸ್ಐ ಅರ್ಜುನ್ ಸಿಐಡಿ ಅಧಿಕಾರಿಗಳ ಬಂಧನಕ್ಕೀಡಾಗಿದ್ದು ಆತನಿಗೆ ಚಿಕ್ಕಮಗಳೂರು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ವಿವಾಹಿತ ಮಹಿಳೆಯೊಬ್ಬರಿಗೆ ಫೋನ್ ಮಾಡಿದ್ದ ಆರೋಪದಲ್ಲಿ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಕೆ.ಎಲ್.ಪುನೀತ್ ಎಂಬಾತನನ್ನು ವಿಚಾರಣೆಗಾಗಿ ಪಿಎಸ್ಐ ಅರ್ಜುನ್ ಒಯ್ದಿದ್ದರು. ಪೊಲೀಸರು ಆತನಿಗೆ ಥಳಿಸಿ ಚಿತ್ರಹಿಂಸೆ ನೀಡಿದ್ದಲ್ಲದೆ, ನೀರು ಕೇಳಿದ್ದಕ್ಕೆ ಮತ್ತೊಬ್ಬ ಆರೋಪಿಯಲ್ಲಿ ಮೂತ್ರ ಮಾಡಿಸಿ, ಕೆಳಗೆ ಬಿದ್ದಿದ್ದ ಮೂತ್ರವನ್ನು ಬಲವಂತವಾಗಿ ಕುಡಿಸಿ ದೌರ್ಜನ್ಯ ಎಸಗಿದ್ದರು ಎಂದು ಪುನೀತ್ ಆರೋಪಿಸಿದ್ದರು. ಈ ಬಗ್ಗೆ ಕೇಸು ದಾಖಲಾಗಿದ್ದರಿಂದ ರಾಜ್ಯ ಸರಕಾರ ಪಿಎಸ್ಐ ಅರ್ಜುನ್ ಅವರನ್ನು ಸೇವೆಯಿಂದ ಹತ್ತು ದಿನಗಳ ಕಾಲ ಅಮಾನತು ಮಾಡಿದ್ದಲ್ಲದೆ, ಆನಂತರ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.


ಪ್ರಕರಣದ ಬಗ್ಗೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ, ಪಿಎಸ್ಐ ಅರ್ಜುನ್ ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದವು.
ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಪಿಎಸ್ಐ ಅರ್ಜುನ್ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ, ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ ಪೊಲೀಸರು ನಿನ್ನೆ ರಾತ್ರಿ ಆರೋಪಿ ಅರ್ಜುನನ್ನು ಬಂಧಿಸಿದ್ದರು. ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The 1st District and Satra court in Chikmagalur has imposed 14 days judicial custody of PSI Arjun for allegedly urinating on a youth of Dalit community. A complaint has been lodged against PSI Arjun for allegedly urinating on a young man from a Dalit community in Chikkamagalur district. The CID police yesterday arrested PSI Arjun in Bangalore in connection with the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm