ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm