ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm