ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm